Friday, July 31, 2026
Homeಬ್ರೇಕಿಂಗ್ ನ್ಯೂಸ್ಮಂಡ್ಯ: ಇಂದು ಪ್ರಧಾನಿ ನರೇಂದ್ರ ಮೋದಿ ಆದಿಚುಂಚನಗಿರಿಗೆ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ಮಂಡ್ಯ: ಇಂದು ಪ್ರಧಾನಿ ನರೇಂದ್ರ ಮೋದಿ ಆದಿಚುಂಚನಗಿರಿಗೆ ಭೇಟಿ: ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

Telegram Group
Join Now

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ತಪೋವನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಈ ವೇಳೆ ಮೋದಿಗೆ ಶ್ರೀ ಮಠದವರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ

ಮೊದಲು ಮೋದಿ ಗೋರಕ್ಷಕನಾಥ ತಪಸ್ಸು ಮಾಡಿ, ಜ್ವಾಲಾಪೀಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಕಾಲಭೈರವೇಶ್ವರಸ್ವಾಮಿ ಸನ್ನಿಧಿಗೆ ತೆರಳಲಿದ್ದಾರೆ. ಅಲ್ಲಿ ದರ್ಶನ ಪಡೆದು ಮಂಗಳಾರತಿ ಮಾಡಲಿದ್ದಾರೆ. ಬಳಿಕ ಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಮಾಡಲಿದ್ದಾರೆ. ಆನಂತರ ಮಂದಿರ ವೀಕ್ಷಿಸಿ ಬಾಲಗಂಗಾಧರನಾಥ ಶ್ರೀಗಳಿಗೆ ನಮನ ಸಲ್ಲಿಸಲಿದ್ದಾರೆ. ನಂತರ ಕ್ರೀಡಾಂಗಣದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಸೌಂದರ್ಯ ಲಹರೀ ಮತ್ತು ಶಿವಮಹಿಮ್ನಹಃ ಸ್ತೋತ್ರಮ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ವೇಳೆ ಶ್ರೀ ಮಠದಿಂದ ಮೋದಿಗೆ ಉಡುಗೊರೆ ನೀಡಿ, ಸನ್ಮಾನಿಸಿ ಗೌರವ ಸಲ್ಲಿಸಲಿದ್ದಾರೆ.

ಚುಂಚನಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಭದ್ರತೆಗೆ 6 ಜನ ಎಸ್ಪಿ, 8 ಎಎಸ್ಪಿ, 18 ಡಿವೈಎಸ್ಪಿ, 53 ಇಸ್ಪೆಕ್ಟರ್, 175 ಸಬ್ ಇನ್ಸಪೆಕ್ಟರ್, 1,00 ಪೊಲೀಸ್ ಕಾನ್‌ಸ್ಟೆಬಲ್, 8 ಕೆಎಸ್‌ಆರ್‌ಪಿ, 16 ಡಿಆರ್ ತುಕಡಿ ನಿಯೋಜಿಸಲಾಗಿದೆ. ಒಟ್ಟು ಎರಡೂವರೆ ಸಾವಿರಕ್ಕೂ ಹೆಚ್ಚು ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಿದ್ದಾರೆ.

ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಕಾರ್ಯಕ್ರಮ ಆರಂಭವಾಗುವ ಒಂದೂವರೆ ತಾಸಿನ ಮುಂಚೆ ಸಾರ್ವಜನಿಕರಿಗೆ ಬರಲು ಸೂಚನೆ ನೀಡಲಾಗಿದೆ. ಇನ್ನೂ ಚುಂಚನಗಿರಿ ಸುತ್ತಮುತ್ತ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರನ್ವಯ ಬೆಳ್ಳೂರು ಪಟ್ಟಣ ಪಂಚಾಯಿತಿಯ 8 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆಗೆ ನಿರ್ಬಂಧ ಹೇರಲಾಗಿದೆ 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments