Wednesday, August 12, 2026
Homeಬ್ರೇಕಿಂಗ್ ನ್ಯೂಸ್ಮುಂಬೈ: ತಂದೆಗೆ ಹೃದಯಾಘಾತ: ಸ್ಮೃತಿ ಮಂಧಾನಾ ವಿವಾಹ ಕಾರ್ಯಕ್ರಮ ಮುಂದೂಡಿಕೆ

ಮುಂಬೈ: ತಂದೆಗೆ ಹೃದಯಾಘಾತ: ಸ್ಮೃತಿ ಮಂಧಾನಾ ವಿವಾಹ ಕಾರ್ಯಕ್ರಮ ಮುಂದೂಡಿಕೆ

Telegram Group
Join Now

ಮುಂಬೈ: ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ಇಂದು ಮದುವೆ ಸಮಾರಂಭ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ಸ್ಮೃತಿ ಮಂಧಾನಾ ಅವರ ತಂದೆ ಶ್ರೀನಿವಾಸ್‌ ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ.

ಅನಾರೋಗ್ಯಕ್ಕೆ ಒಳಗಾದ ಬೆನ್ನಲ್ಲೇ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಅಂಬುಲೆನ್ಸ್‌ ಬಂದು ಶ್ರೀನಿವಾಸ್‌ ಅವರನ್ನು ಕರೆದುಕೊಂಡು ಹೋಗಿದೆ.

ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. 

ಅರಿಶಿನ ಶಾಸ್ತ್ರದ ವಿಡಿಯೋಗಳಿಂದ ಹಿಡಿದು ವಧು ಮತ್ತು ವರನ ತಂಡಗಳ ನಡುವಿನ ಸ್ನೇಹಪರ ಕ್ರಿಕೆಟ್ ಪಂದ್ಯದವರೆಗೆ, ಮದುವೆಗೆ ಮುನ್ನ ಹಲವು ಮನಮೋಹಕ ಕ್ಷಣಗಳು ಅನಾವರಣಗೊಂಡಿವೆ. ಹೊಸದಾಗಿ ಬಿಡುಗಡೆಯಾಗಿರುವ ವಿಡಿಯೋದಲ್ಲಿ, ಸ್ಮೃತಿ ಮತ್ತು ಪಲಾಶ್ ಇಬ್ಬರೂ ಅತ್ಯಂತ ಸುಂದರವಾಗಿ, ಸಂಪೂರ್ಣವಾಗಿ ಕೊರಿಯೋಗ್ರಾಫ್ ಮಾಡಿದ ನೃತ್ಯವನ್ನು ಪ್ರದರ್ಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments