ಬೆಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದದ್ದು ಆಕಸ್ಮಿಕ ಘಟನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಘಟನೆ ಬಳಿಕ ಎಡಿಜಿಪಿ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ. ಇದು ಕೋಮುಗಲಭೆ ಅಂತಾ ಹೇಳೋದಕ್ಕೆ ಆಗೋದಿಲ್ಲ. ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇಂತಹ ಸಣ್ಣ ಘಟನೆಗಳಿಗೆ ಪ್ರಚಾರ ಕೊಡೋದಕ್ಕೆ ಹೋಗಬೇಡಿ. ಈಗಾಗಲೇ ಪರಿಸ್ಥಿತಿ ಕಂಟ್ರೋಲ್ಗೆ ತೆಗೆದುಕೊಂಡಿದ್ದೇವೆ. ಪೊಲೀಸರು ಎಲ್ಲ ಭದ್ರತೆ ಇಟ್ಟುಕೊಂಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಒಂದು ಪ್ಲಟೋನ್ ಕೂಡ ಇಟ್ಟುಕೊಂಡಿದ್ದರು. ಘಟನೆ ಸಂಬಂಧ 52 ಜನರನ್ನು ಬಂಧಿಸಿದ್ದೇವೆ ಎಂದು ತಿಳಿಸಿದರು.
ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ನಾನು ಮನವಿ ಮಾಡ್ತೇನೆ. ಪೊಲೀಸರು ಇದ್ದಾರೆ ಅವರಿಗೆ ವಿಚಾರಣೆ ಮಾಡಲು ಬಿಡಿ. ಘಟನೆ ಹೆಚ್ಚಾಗದ ರೀತಿಯಲ್ಲಿ ಏನಾದರೂ ಸಲಹೆ ಇದ್ದರೆ ಕೊಡಲಿ. ಅದನ್ನು ಬಿಟ್ಟು ರಾಜಕೀಯ ಮಾಡಬಾರದು. ಈಗಾಗಲೇ ಎಡಿಜಿಪಿ ಹೋಗಿದ್ದಾರೆ. ಅವಶ್ಯ ಬಿದ್ದರೆ ನಾನು ಸ್ಥಳಕ್ಕೆ ಹೋಗುತ್ತೇನೆ ಎಂದರು.
ನಾಗಮಂಗಲ ಘರ್ಷಣೆ – ಇದೊಂದು ಆಕಸ್ಮಿಕ ಘಟನೆ, ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದ ಗೃಹ ಸಚಿವ ಜಿ. ಪರಮೇಶ್ವರ್
RELATED ARTICLES