ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಚ್ಚರಿಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಈ ಥರ ನಡೆಯುತ್ತಿರೋದು ಇದೇ ಮೊದಲಲ್ಲ, ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಅಂತ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ಈ ಹಿಂದೆ ವಿಚಾರದಲ್ಲಿ ದೊಡ್ಡ ಗಲಾಟೆಯೇ ಆಗಿದೆ. ಜೈಲಿನ ಕೈದಿಗಳಿಗೆ ಪಂಚತಾರಾ ಹೋಟೆಲ್ ಥರ ಆಗಿದೆ. ದರ್ಶನ್ ವಿಚಾರದಲ್ಲಿ ಪ್ರಚಾರ ಆಗಿದೆ. ಈ ಸರ್ಕಾರದ ಮೇಲೆ ಜನರಿಗೆ ನಂಬಿಕೆ ಇಲ್ಲದಾಗಿದೆ. ರಾಜ್ಯದಲ್ಲಿ ಸರ್ಕಾರ ಇದೆ ಅನ್ನುವ ಭಾವನೆಯೇ ಇಲ್ಲದಾಗಿದೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿಗೆ ಆಡಳಿತ ನಡೆಸೋದಕ್ಕೆ ಸಮಯ ಇಲ್ಲ. ಹಗರಣಗಳಿಗೆ ಸಮಜಾಯಿಷಿ ನೀಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಇನ್ನೆಲ್ಲಿ ಅವರು ಆಡಳಿತದಲ್ಲಿ ತೊಡಗಿಸಿಕೊಳ್ಳುವುದು ಎಂದು ಪ್ರಶ್ನಿಸಿದರು.
ಪರಪ್ಪನ ಅಗ್ರಹಾರ ಜೈಲ್ ಫೈವ್ ಸ್ಟಾರ್ ಹೋಟೆಲ್ ಥರ ಆಗಿದೆ ಎಂದ HDK..!
RELATED ARTICLES