ಸುಳ್ಯ : ಪತ್ನಿಯನ್ನು ಗುಂಡಿಕ್ಕಿ ಕೊಂದು ಬಳಿಕ ಪತಿ ತಾನೂ ವಿಷ ಸೇವಿಸಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.
ರಾಮಚಂದ್ರಪ್ಪ(52) ಎಂಬಾತ ತನ್ನ ಪತ್ನಿ ವಿನೋದರನ್ನು(48) ಗುಂಡಿಕ್ಕಿ ಕೊಂದು ಬಳಿಕ ತಾನು ಕೂಡ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ಕುಡಿದ ಮತ್ತಿನಲ್ಲಿ ರಾಮಚಂದ್ರ ತನ್ನ ಪತ್ನಿ ವಿನೋದ ಜೊತೆ ಜಗಳ ಮಾಡಿಕೊಂಡಿದ್ದಾನೆ. ಕಲಹ ವಿಕೋಪಕ್ಕೆ ತೆರಳಿದ್ದು, ಪತ್ನಿ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಪತ್ನಿ ಮೃತಳಾದ ಬಳಿಕ ಭಯದಿಂದ ರಾಮಚಂದ್ರಪ್ಪ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿದ್ದು. ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!
RELATED ARTICLES
