Wednesday, August 12, 2026
Homeಸಿನೆಮಾʼಗಣಪʼ, ʼಕರಿಯ-2ʼ ಚಿತ್ರದ ಯುವನಟ ಸಂತೋಷ್ ಬಾಲರಾಜ್ ನಿಧನ!

ʼಗಣಪʼ, ʼಕರಿಯ-2ʼ ಚಿತ್ರದ ಯುವನಟ ಸಂತೋಷ್ ಬಾಲರಾಜ್ ನಿಧನ!

Telegram Group
Join Now

ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.

ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments