Wednesday, February 11, 2026
Homeಕ್ರೈಮ್ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ, ಚೀಟಿ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ!

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ, ಚೀಟಿ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ!

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ನಡೆದಿದೆ.

ಮೃತನನ್ನ 28 ವರ್ಷದ ಮಧು ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ‌ ಸಲ್ಲಿಸುತ್ತಿದ್ದರು.

ಕಳೆದ ಒಂದು ತಿಂಗಳ ಹಿಂದಷ್ಟೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು. ಆದರೆ, ತಮ್ಮ ಮನೆಯಲ್ಲೇ ಅನಾರೋಗ್ಯದ ಸಮಸ್ಯೆ ಎಂದು ಚೀಟಿ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!