ಮಡಿಕೇರಿ : ಆಸ್ತಿ ವಿಚಾರದಲ್ಲಿ ದೊಡ್ಡಪ್ಪ ಹಾಗೂ ದೊಡ್ಡಮ್ಮನ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಮಡಿಕೇರಿ ತಾಲೂಕಿನ ವಣಚಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿಗಳಾದ ಮುತ್ತವ್ವ ಹಾಗೂ ಅವರ ಪತಿ ಉತ್ತಪ್ಪ ಆ.27 ರಂದು ತಮ್ಮ ಮನೆಯಲ್ಲಿದ್ದ ಸಂದರ್ಭ ಉತ್ತಪ್ಪನವರ ತಮ್ಮನ ಮಕ್ಕಳಾದ ಸುಬ್ರಮಣಿ ಮತ್ತು ಅಚ್ಚಯ್ಯ ಎಂಬವರು ಬಂದು ಆಸ್ತಿ ವಿಚಾರದಲ್ಲಿ ಜಗಳ ಮಾಡಿ ಉತ್ತಪ್ಪನವರ ಮೇಲೆ ಹಲ್ಲೆ ನಡೆಸಿದ್ದಾರೆ. ಜಗಳ ಬಿಡಿಸಲು ಬಂದ ಮುತ್ತವ್ವನವರ ಮೇಲೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
