ದಕ್ಷಿಣ ಕನ್ನಡ: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು KSRTC ಬಸ್ ಸ್ಟ್ಯಾಂಡ್ ಹತ್ತಿರ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.

ಹೌದು .. ಇಷ್ಟು ದಿನ ದೇವಾಲಯದ ಹತ್ತಿರ ಆಟೋ ಸ್ಟ್ಯಾಂಡ್ ಇಲ್ಲದೇ ಒದ್ದಾಡುತ್ತಿದ್ದ ಜನರಿಗೆ ಈಗ ಸುಗಮವಾಗಿ ಸಂಚಾರ ಮಾಡಲು ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಹೀಗಾಗಿ ಬಿಎಂಎಸ್ ಆಟೋ ಚಾಲಕರಿಗೆ ನೂತನ ಆಟೋ ನಿಲ್ದಾಣ ನಿರ್ಮಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಟ್ಟ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಸಹಕರಿಸಿದ ಎಲ್ಲಾ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಧ್ಯಕ್ಷರು ಮತ್ತು ಸರ್ವಸದಸ್ಯರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಅದೇ ರೀತಿ ಕುಕ್ಕೆ ಸುಬ್ರಮಣ್ಯ KSRTC ಬಸ್ ಸ್ಟ್ಯಾಂಡ್ ಹತ್ತಿರ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಟ್ಟ ದೇವಳದ ಕಾರ್ಯನಿರ್ವಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ಹಾಗೂ ಸಹಕರಿಸಿದ ಎಲ್ಲಾ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿಗಳಿಗೆ ಬಿಎಮ್ಎಸ್ ಸಂಯೋಜಿತ ಆಟೋ ಚಾಲಕರ ಸಂಘ ರಿಜಿಸ್ಟರ್ಡ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ಘಟಕ ಇವರುಗಳು ತುಂಬು ಹೃದಯಪೂರ್ವಕವಾಗಿ ಹರಸಿದರು.
ವರದಿ: ಚೇತನ್ ನಾಯ್ಕ್, ಕುಕ್ಕೆಸುಬ್ರಮಣ್ಯ
9483964639
