ಬಾಳೆಹೊನ್ನೂರು: ಸಮೀಪದ ಮಾಗೋಡು ಪ್ರೌಢಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜರುಗಿಸಲಾಯಿತು.
ಹೌದು .. ಈ ಕಾರ್ಯಕ್ರಮದಲ್ಲಿ ಹಲವು ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ವೇಳೆ ಲಯನ್ಸ್ ಕ್ಲಬ್ ಅಧ್ಯಕ್ಷ ವಿಕ್ರಂ ಮಾತನಾಡಿ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು, ಪ್ರಾಣಿ ಪಕ್ಷಿಗಳಿಗೆ ಆಹಾರವಾಗುವ ಹಣ್ಣಿನ ಗಿಡಗಳನ್ನು ನೆಡಬೇಕು ಎಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಸುಧಾಕರ್, ಖಜಾಂಚಿ ರವೀಂದ್ರ ಕೆ.ಸಿ. ವಲಯ ಅಧ್ಯಕ್ಷರಾದ ಶಿವರಾಮ್ ಎಂಡಿ, ಎಂ.ಆರ್. ಮಂಜುನಾಥ್ ,ದಿವಾಕರ್, ವಿಜಯೇಂದ್ರ, ನವೀನ್, ಸ್ಥಳೀಯ ಮುಖಂಡರು, ಶಾಲೆಯ ಶಿಕ್ಷಕರಾದ ಮಂಜುನಾಥ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
