ಚಿಕ್ಕಮಗಳೂರು: ಕ್ಯಾಂಟರ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಡ್ಲೂರು ಗೇಟ್ ಬಳಿ ನಡೆದಿದೆ.

ಬೀರೂರು ತಾಲೂಕಿನ ಕುಡ್ಲೂರು ಗೇಟ್ ಬಳಿ ಅಪಘಾತ ಸಂಭವಿಸಿದ್ದು ಕ್ಯಾಂಟರ್ ಚಾಲಕ ಮೋಹನ್ (30), ಕ್ಲೀನರ್ ಮೊಹಮ್ಮದ್ ಆಸೀಫ್ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನುಳಿದ ಬಸ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೀರೂರು ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.