ಹಾಸನ: ಕಾಲು ಜಾರಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದ ಡಿಂಕ ಗ್ರಾಮದ ನಾಲೆಯಲ್ಲಿ ಶವ ಪತ್ತೆಯಾಗಿದೆ.
ಹೌದು .. ಮಹಿಳೆ ಬಟ್ಟೆ ತೊಳೆಯಲು ಹೋದಾಗ ಈ ಅಚಾತುರ್ಯ ನಡೆದಿದ್ದು ನಾಲೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ.
ಪ್ರಕರಣ ಸಂಬಂಧ ಶ್ರವನಬೆಳಗೊಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ಉಜಿರೆಗೆ ತೆರಳಿ ನಿವಾಸದಿಂದ ತಿಮರೋಡಿಯನ್ನು ಬಂಧಿಸಿದ್ದರು.
ಮಧ್ಯಾಹ್ನ ಮೆಡಿಕಲ್ ಪರೀಕ್ಷೆ ನಡೆಸಿ ಬ್ರಹ್ಮಾವರ ತಾಲೂಕು ಕೋರ್ಟ್ಗೆ ಹಾಜರು ಪಡಿಸಿದರು. ಈ ಸಂದರ್ಭದಲ್ಲಿ ತಿಮರೋಡಿ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಜಾಮೀನು ನೀಡಲು ನಿರಾಕರಿಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಮಹೇಶ್ ಶೆಟ್ಟಿಯ ಜಾಮೀನು ಅರ್ಜಿಯ ವಿಚಾರಣೆ ಅಗಸ್ಟ್ 23ಕ್ಕೆ ನಡೆಯಲಿದೆ.
