ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಶ್ರೀ ದೇವೀರಮ್ಮನವರ ದೀಪೋತ್ಸವ ಅ.19 ರಿಂದ 23ರವರೆಗೆ ನಡೆಯಲಿದೆ, ಬೆಟ್ಟ ಹತ್ತಲು 2 ದಿನ ಅವಕಾಶ ಕಲ್ಪಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ವ್ಯವಸ್ಥಾಪಕ ಕುಲಶೇಖರ್ ಪ್ರಕಟಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಅ.19 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಾಗೂ ಅ.20 ರಂದು ಬೆಳಗ್ಗೆ 7 ಗಂಟೆಯಿಂದ ಬೆಟ್ಟ ಹತ್ತಲು ಭಕ್ತರಿಗೆ ಅವಕಾಶ ನೀಡಲಿಲ್ಲ, ಗಿರಿಪ್ರದೇಶದಲ್ಲಿ ಈ ಬಾರಿ ಅತಿ ಹೆಚ್ಚು ಮಳೆಯಾಗುತ್ತಿರುವ ಕಾರಣ ರಾತ್ರಿ ಹತ್ತುವುದನ್ನು ನಿಷೇಧಿಸಲಾಗಿದೆ, ಭಕ್ತರು ಮನವಿ ಮಾಡಬೇಕೆಂದು ಮನವಿ ಮಾಡಿದರು.
ಅ.19 ರಂದು ಬೆಳಗ್ಗೆ 7 ಗಂಟೆಗೆ ಬೆಟ್ಟದಲ್ಲಿ ಅಭಿಷೇಕ, ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ 9 ರಿಂದ 5 ಗಂಟೆಯವರೆಗೆ ದೇವೀರಮ್ಮ ದೇವಿಯವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 20 ರಂದು 3 ಗಂಟೆಯವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿದ್ದು, ಸಂಜೆ 7 ಗಂಟೆಗೆ ದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
21 ರಂದು ದೇವೀರಮ್ಮ ದೇವಸ್ಥಾನದಲ್ಲಿ ದೇವಿಯವರಿಗೆ ಉಡುಗೆ ಪೂಜೆ, ಸಂಜೆ 6.30ಕ್ಕೆ ಬೆಣ್ಣೆಬಟ್ಟೆ ಸುಡುವುದು ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ, 22 ರಂದು ಮಹಾಗಣಪತಿ ಪೂಜೆ, ಕುಂಕುಮಾರ್ಚನೆ ಇತ್ಯಾದಿ. 23 ರಂದು ಮಹಾಮಂಗಳಾರತಿ, ಹರಕೆ ಒಪ್ಪಿಸುವುದು, ತೀರ್ಥಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ಪ್ರಕಟಿಸಿದರು.
ಶ್ರೀ ಕ್ಷೇತ್ರದಲ್ಲಿ ನಡೆಯುವ ಪ್ರಸಾದ ವಿನಿಯೋಗಕ್ಕೆ ಅಕ್ಕಿ, ಬೇಳೆ, ಎಣ್ಣೆ ಹಾಗೂ ಧನಸಹಾಯ ಮಾಡುವವರು ಕ್ಷೇತ್ರಕ್ಕೆ ಒಪ್ಪಿಸುತ್ತಾರೆ. ಬೆಟ್ಟದ ಮೇಲೆ ತೆಂಗಿನಕಾಯಿ ಒಡೆಯುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.
ದೇವಿಯ ದರ್ಶನವಾದ ಬಳಿಕ ಬೆಟ್ಟದ ಮೇಲೆ ಕುಳಿತುಕೊಳ್ಳದೆ ಕೆಳಗೆ ಇಳಿಯಬೇಕು, ಬೆಟ್ಟದ ಹಾಗೂ ದೇವಸ್ಥಾನದ ಸುತ್ತಮುತ್ತಲಿನ ಪ್ಲಾಸ್ಟಿಕ್ ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಎಸೆಯಬಾರದು, ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ, ತರೀಕೆರೆ, ಬೀರ, ಕಡೂರು, ಚಿಕ್ಕಮಗಳೂರಿನಿಂದ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೆಟ್ಟದಲ್ಲಿ ಪಟಾಕಿ ಒಡೆಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ, ಭಕ್ತರು ಸ್ವಚ್ಛತೆ ಕಾಪಾಡುವ ಜೊತೆಗೆ ಪರಿಸರದ ಕಾಳಜಿಯನ್ನು ಹೊಂದಿದ್ದಾರೆ ಹೊಂದಬೇಕು ಎಂದು ಅವರು ಹೇಳಿದರು, ಬೆಟ್ಟಹತ್ತುವ ಸಂದರ್ಭದಲ್ಲಿ ಭಕ್ತರು ನೂಕುನುಗ್ಗಲು ನಿಯಂತ್ರಣಕ್ಕೆ ಗ್ರಾಮಸ್ಥರು 250 ಸ್ವಯಂಸೇವಕ ಯುವಕರನ್ನು ನೇಮಿಸಿದ್ದಾರೆ ಮಾಡಿದ್ದೇವೆಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಬಸವರಾಜ್ಗೌಡ, ಸದಸ್ಯರುಗಳಾದ ನಿಂಗೇಗೌಡ, ಸುನಿಲ್ಕುಮಾರ್, ದಿನೇಶ್, ಹರೀಶ್ಗೌಡ
