Wednesday, March 25, 2026
Homeಕ್ರೈಮ್ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆ, ಚಾಕು ಇರಿತ!

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಗಲಾಟೆ, ಚಾಕು ಇರಿತ!

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಸಿಗರೇಟ್ ವಿಚಾರವಾಗಿ ಎರಡು ಟೀಮ್ ಗಳ ನಡುವೆ ಗಲಾಟೆ ನಡೆದಿದ್ದು, ಓರ್ವನಿಗೆ ಚಾಕು ಇರಿದ ಘಟನೆ ನಗರದ ಹೊರವಲಯದ ಶಕ್ತಿನಗರದಲ್ಲಿ ನಡೆದಿದೆ.

ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಈ ವೇಳೆ ಯುವನೊಬ್ಬ ಬಾರ್‌ ಒಳಗಿನಿಂದ ಚಾಕುವನ್ನು ತಂದು ಏಕಾಏಕಿ ಎದುರಾಳಿ ತಂಡದ ಮೇಳೆ ದಾಳಿ ನಡೆಸಿದ್ದಾನೆ. ಈ ಎಲ್ಲಾ ಗಲಾಟೆಗಳು ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿವೆ

ಘಟನೆಯಲ್ಲಿ ಮೂಗ್ತಿಹಳ್ಳಿ ಗ್ರಾಮದ ಅನಿಲ್ ಕುಮಾರ್ ಗೆ ಚಾಕು ಇರಿದಿದ್ದು ತೀವ್ರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿಒತ್ಸೆಗಾಗಿ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ಬಳಿಕ ಪರಾರಿಯಾಗಿದ್ದ ಯುವಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!