ಚಿಕ್ಕಮಗಳೂರು: ಗೋ ಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಹೌದು ..ಗೋ ಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಗೋ ಕಳ್ಳರಿಗೆ ಸಹಕರಿಸುವ ನೀತಿ ಅನುಸರಿಸುತ್ತಿದೆ. ಅಕ್ರಮಗೋವು ಸಾಗಾಣೆದಾರರಿಗೆ ದಾರಿಮಾಡಿಕೊಡುವ ತಿದ್ದುಪಡಿಯನ್ನು ಈ ಕೂಡಲೇ ಕೈ ಬಿಡಬೇಕು
ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಹಸುವನ್ನು ಉಳಿಸೋಣ, ಘೋವು ರಕ್ಷಿಸೋಣ ಪೋಸ್ಟರ್ ಹಿಡಿದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಕಿಡಿಕಾರಿದರು.
