ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಸಡಗರದಿಂದ ಹಬ್ಬವನ್ನು ಆಚರಿಸುತ್ತಿದ್ದಾರೆ.
ಹಬ್ಬದ ಪ್ರಯುಕ್ತ ಬುಧವಾರ ರಾತ್ರಿಯಿಂದಲೇ ಜಿಲ್ಲೆಯ ವಿವಿಧ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆಗಳು ನೆರವೇರಿದವು, ಏಸುಕ್ರಿಸ್ತನ ಜನನವನ್ನು ಸಾರುವ ಸುಂದರ ಗೋದಲಿಗಳು ಭಕ್ತರ ಆಕರ್ಷಣೆಯ ಕೇಂದ್ರಬಿಂದುವಾಗಿವೆ.
ಕೂದುವಳ್ಳಿಯ ಲೂರ್ದ್ ಚರ್ಚ್ನಲ್ಲಿ ಪವಿತ್ರ ಬಲಿಯಾರ್ಪಣೆ ನೆರವೇರಿದ್ದು, ಪ್ರಾರ್ಥನೆಯ ನಂತರ ಕ್ರೈಸ್ತ ಬಾಂಧವರು ಪರಸ್ಪರ ಕೇಕ್ ಹಂಚಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬದ ಸಂತೋಷವನ್ನು ಹಂಚಿಕೊಂಡರು.
