ಚಿಕ್ಕಮಗಳೂರು : ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಪ್ರಕರಣ ಸಂಬಂಧ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿದ್ದಾರೆ.
ಹೌದು .. ಚಿಕ್ಕಮಗಳೂರು ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರದ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ತನಿಖೆಯಲ್ಲಿ ಸರ್ಕಾರ ಭಾಗವಹಿಸಲ್ಲ, ಪೊಲೀಸರೇ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಹಾಗೆ ತನಿಖೆ ಹಾಗೂ ಸಾಕ್ಷಿಗಳ ಆಧಾರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ. ವೈಯಕ್ತಿಕ ವಿಚಾರ, ಮತ್ಯಾರಿಗೋ ಸಪೋರ್ಟ್, ಇನ್ಯಾರಿಗೋ ತೊಂದರೆ ಕೊಡೋದು ಇಲ್ಲವೇ ಇಲ್ಲ ಆರಂಭದಿಂದಲೂ ನಮ್ಮ ಸರ್ಕಾರ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿದೆ. ವರದಿ ಯಾವಾಗ ಕೊಡುತ್ತಾರೆ ಎಂದು ಇಷ್ಟು ಬೇಗ ನಾನು ಹೇಳಲು ಆಗುವುದಿಲ್ಲ ಎಂದು ಚಿಕ್ಕಮಗಳೂರು ಜಿಲ್ಲೆ ಲಕ್ಕವಳ್ಳಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
