ಚಿಕ್ಕಮಗಳೂರು: ಅಕ್ರಮವಾಗಿ ಮಣ್ಣು ಮುಕ್ಕ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಆರೋಪಿಗಳನ್ನ ಸಿಐಡಿ ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸಿದ್ದಾರೆ.
ಹೌದು .. ಮಣ್ಣು ಮುಕ್ಕ ಹಾವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಸಿಐಡಿ ಅರಣ್ಯ ಸಂಚಾರಿ ದಳ ಪೊಲೀಸರು ದಾಳಿ ನಡೆಸಿ ಬಂಧಿಸಲು ತೆರಳಿದಾಗ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳು ಆದರೂ ಬೆನ್ನಟ್ಟಿ ಆರೋಪಿಗಳ ಬಂಧಿಸಿದರು.
ಯತೀಶ್,ವಂಶಿಕೃಷ್ಣ,ಆರೀಫ್ ,ಷಫಿ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ ಹಾವು ಸೇರಿದಂತೆ ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.
