ಚಿಕ್ಕಮಗಳೂರು : ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ.

ಕಾಂತರಾಜ್ (45) ಮೃತ ದುರ್ದೈವಿಯಾಗಿದ್ದು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದನು.ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದ ಕಾಂತರಾಜ್ ಅವರ ಕುಟುಂಬ ಊರಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ
ಅಪಘಾತದಲ್ಲಿ ಬಲಗಾಲು ಕಳೆದುಕೊಂಡಿದ್ದ ಕಾಂತರಾಜ್ ಕೃತಕ ಕಾಲು ಜೋಡಣೆ ಮೂಲಕ ಕೆಲಸ ಮಾಡುತ್ತಿದ್ದನು ಆದರೆ ಅಪಘಾತದಲ್ಲಿ ಕಾಲು ಕಳೆದುಕೊಂಡಾಗಿನಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ.ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ,
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.