ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯ ಘೋಷಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಚಿವರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಮುಖ್ಯವಾಗಿ ಜನಹಿತ ಮತ್ತು ಪರಿಸರ ಸಂರಕ್ಷಣೆಯ ನಡುವೆ ಸಮತೋಲನ ಸಾಧಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಸ್ಥಳೀಯರ ಜೀವನೋಪಾಯ, ಅಭಿವೃದ್ಧಿ ಚಟುವಟಿಕೆಗಳು ಹಾಗೂ ಪರಿಸರ ರಕ್ಷಣೆಯನ್ನು ಸಮನ್ವಯಗೊಳಿಸುವ ಬಗ್ಗೆ ಹಲವು ಸಲಹೆಗಳು ವ್ಯಕ್ತವಾದವು.

ಈ ಸಂದರ್ಭದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡರು ಭಾಗವಹಿಸಿ, ಸಾರ್ವಜನಿಕರ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಪರಿಸರ ಸಂರಕ್ಷಣೆ ಜೊತೆಗೆ ಜನರ ಹಿತಾಸಕ್ತಿಯನ್ನೂ ಕಾಪಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು
