Friday, June 26, 2026
Homeಕ್ರೈಮ್ಚಿಕ್ಕಮಗಳೂರು: ಸಖರಾಯಪಟ್ಟಣದಲ್ಲಿ ಕೈ ಕಾರ್ಯಕರ್ತ ಹತ್ಯೆ ಕೇಸ್:‌ ಐವರು ಆರೋಪಿಗಳ ಬಂಧನ, ಮೂವರಿಗಾಗಿ ಶೋಧ!

ಚಿಕ್ಕಮಗಳೂರು: ಸಖರಾಯಪಟ್ಟಣದಲ್ಲಿ ಕೈ ಕಾರ್ಯಕರ್ತ ಹತ್ಯೆ ಕೇಸ್:‌ ಐವರು ಆರೋಪಿಗಳ ಬಂಧನ, ಮೂವರಿಗಾಗಿ ಶೋಧ!

ಚಿಕ್ಕಮಗಳೂರು: ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ, ಗ್ರಾಪಂ ಸದಸ್ಯ ಗಣೇಶ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪೊಲೀಸರ ಕಾರ್ಯಚರಣೆಯನ್ನು ತೀವ್ರಗೊಳಿಸಿದ್ದಾರೆ. ಪ್ರಕರಣದ ಒಟ್ಟು ಎಂಟು ಮಂದಿ ಆರೋಪಿಗಳಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಡಿ.5ರ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಕಲ್ಮುರುಡೇಶ್ಚರ ಮಠದ ಬಳಿ ಮತ್ತೆ ಗಲಾಟೆ ನಡೆದಿತ್ತು. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ನಾಲ್ಕು ತಂಡ ರಚಿಸಿ ತನಿಖೆಗೆ ಸೂಚಿಸಿದ್ದರು.

ಈ ಪ್ರಕರಣ ಸಂಬಂಧ ಐವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಮೂವರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಅಜಯ್, ನಿಥಿನ್ ಅಲಿಯಾಸ್ ಸೈನ್ಸ್, ದರ್ಶನ್ ಅಲಿಯಾಸ್ ಜಪಾನ್‌ಗಾಗಿ ಶೋಧ ನಡೆಯುತ್ತಿದೆ.

ಸಖರಾಯಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಶನಿವಾರ (ಡಿ.6) 100 ಪೊಲೀಸರು, ಒಂದು ಕೆ.ಎಸ್.ಆರ್.ಪಿ ತುಕಡಿ ನಿಯೋಜಿಸಲಾಗಿತ್ತು. ಇಂದು (ಡಿ.7) ಮತ್ತೆ ಸಖರಾಯಪಟ್ಟಣದಲ್ಲಿ 80 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments