Tuesday, February 10, 2026
Homeಕ್ರೈಮ್ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ KSRTC ಬಸ್: ಪ್ರಯಾಣಿಕರ ಪರದಾಟ

ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ KSRTC ಬಸ್: ಪ್ರಯಾಣಿಕರ ಪರದಾಟ

ಚಿಕ್ಕಮಗಳೂರು: ಸಾರಿಗೆ ಸಂಸ್ಥೆಯ ಬಸ್‌ಗಳ ಸರಿಯಾದ ನಿರ್ವಹಣೆ ಇಲ್ಲದಿರುವುದು ಪ್ರಯಾಣಿಕರಿಗೆ ಆಗಾಗ ಸಂಕಷ್ಟ ತಂದೊಡ್ಡುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ, ಚಿಕ್ಕಮಗಳೂರು ತಾಲೂಕಿನ‌ ಕೈಮರ ಸಮೀಪ ದಾರಿ ಮಧ್ಯೆ KSRTC ಬಸ್‌ ಕೆಟ್ಟು ನಿಂತು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

ಹೌದು .. ಕೆಎಸ್​​ಆರ್​​​ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್​​​ನ್ನು ​​ ಸ್ಟಾರ್ಟ್​​ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟಿದ್ದಾರೆ. ಕೊನೆಗೆ ಪ್ರಯಾಣಿಕರೇ ಇಳಿದು ತಳ್ಳಿದ್ದಾರೆ. ಚಿಕ್ಕಮಗಳೂರು ನಗರದಿಂದ ದೇವೀರಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದ ಈ ಬಸ್​​​​​ ಏಕಾಏಕಿ ದಾರಿ ಮಧ್ಯ ನಿಂತಿದೆ. ಎಷ್ಟೇ ಪ್ರಯತ್ನಿಸಿದರೂ ಸ್ಟಾರ್ಟ್​​ ಆಗಿಲ್ಲ. ಕೊನೆಗೆ ಎಲ್ಲರನ್ನು ಬಸ್ಸಿನಿಂದ ಕೇಳಗೆ ಇಳಿಸಿ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಹಿಂದಕ್ಕೆ ತಳ್ಳಿದ್ದಾರೆ.

ಈ ಮಾರ್ಗದಲ್ಲಿ ಪ್ರತಿ ಬಾರಿ ಇದೇ ರೀತಿ ಸಮಸ್ಯೆ. ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದ ಇಲಾಖೆ. ಈ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!