ಚಿಕ್ಕಮಗಳೂರು: ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಚಿಕ್ಕಮಗಳೂರು ನಗರ ಪ್ರವಾಸ ಕೈಗೊಂಡಿದ್ದಾರೆ.
ಹೌದು .. ಚಿಕ್ಕಮಗಳೂರು ಗ್ರಾಮಾಂತರ ಬಸ್ ನಿಲ್ದಾಣದ ಆವರಣದಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಚಿಕ್ಕಮಗಳೂರು ವಿಭಾಗದಿಂದ ನೂತನವಾಗಿ ನಿರ್ಮಿಸಲಾಗುವ ನೂತನ ಬಸ್ ನಿಲ್ದಾಣದ ಶಂಕುಸ್ಥಾಪನೆ ಮಾಡಲಿದ್ದಾರೆ.
ಇದೇ ಸಂದರ್ಭದಲ್ಲೂ ವಸತಿ ಗೃಹಗಳ ನಿರ್ಮಾಣ ಸಮಾರಂಭಕ್ಕೂ ಆಗಮಿಸಿಲಿದ್ದಾರೆ. ಆ ನಂತರ ನೇರವಾಗಿ ಬೆಂಗಳೂರಿಗೆ ತೆರಳಲಿದ್ದಾರೆಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ.
