ಚಿಕ್ಕಮಗಳೂರು: ಕಾಫಿನಾಡು ಮಲೆನಾಡು ಹಾಗೂ ಬಯಲುಸೀಮೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದ್ದು, ಇತ್ತೀಚೆಗೆ ಮಿತಿ ಮೀರಿದ್ದು ಆನೆ ಹಾವಳಿಗೆ ರೈತರು ಬೆಳೆದ ಬೆಳೆಯಲ್ಲಿ ಆನೆ ಕಾಲಡಿಯಲ್ಲಿ ಸಿಕ್ಕಿ ಮಣ್ಣಾಗಿದ್ದೇ ಹೆಚ್ಚು.
ಹೌದು .. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚಿದ ಕಾಡಾನೆ ಸಂಚಾರ ತಿಮ್ಮನಬೈಲು ಗ್ರಾಮದ ರಸ್ತೆ ಬದಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಒಂಟಿ ಸಲಗ

ಹಾಗೆ ನಂದಿಬಟ್ಟಲು, ತಿಗಡ, ತಣಿಗೆಬೈಲು ವ್ಯಾಪ್ತಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಆನೆ ಕಾಡಂಚಿನ ಗ್ರಾಮಗಳ ಹಳ್ಳಿಗರು ಪ್ರಾಣಕ್ಕೂ ಆಪತ್ತು ಉಂಟಾಗಿದೆ ಹೀಗಾಗಿ ಆನೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳೀಯರ ಒತ್ತಾಯ ಮಾಡಿದ್ದಾರೆ.
