Thursday, August 7, 2025
!-- afp header code starts here -->
Homeಜಿಲ್ಲಾಸುದ್ದಿಚಿಕ್ಕಮಗಳೂರು: ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು: ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ ಕಮಿಷನ್ ಹಣ ಬಿಡುಗಡೆ ಮಾಡಬೇಕು ಎಂದು ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಕಾರಣ ನೀಡಿ ಪಡಿತರವನ್ನು ಅಂಗಡಿ ಮಾಲೀಕರಿಗೆ 15ನೇ ತಾರೀಖಿನಿಂದ ಎತ್ತುವಳಿ ನೀಡಲಾಗುತ್ತಿದೆ. ಇದರಿಂದ ಪಡಿತರದಾರರಿಗೆ ವಿತರಣೆ ಮಾಡುವುದು ತಡವಾಗುತ್ತಿದೆ ಎಂದು ತಿಳಿಸಿದರು.

ನಿತ್ಯ ಅಂಗಡಿ ಮುಂದೆ ಸರತಿ ಸಾಲು ಬೆಳೆಯುತ್ತದೆ. ಹೀಗಾಗಿ ಹಿಂದಿನ ಪದ್ದತಿಯಂತೆ ತಿಂಗಳ ೫ನೇ ತಾರೀಖಿನೊಳಗೆ ಪಡಿತರವನ್ನು ಎತ್ತುವಳಿ ಮಾಡಿಸಿದರೆ ವಿತರಣೆ ಮಾಡಲು ಅನುಕೂಲ ಆಗಲಿದೆ ಎಂದರು.

ಅಂಗಡಿ ಮಾಲೀಕರಿಗೆ ಬರಬೇಕಾದ ಅನ್ನಭಾಗ್ಯ ಅಕ್ಕಿಯ ಕಮಿಷನ್ ಹಣವನ್ನು ಆಯಾ ತಿಂಗಳಲ್ಲೇ ಪಾವತಿ ಮಾಡಬೇಕು. ಸುಮಾರು 7 ವರ್ಷದಿಂದ ಇಕೆವೈಸಿ ಮಾಡಿರುವ ಹಣವೂ ಕೂಡ ಬಂದಿಲ್ಲ. ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಿಗೆ ಬಿಲ್ಲಿಂಗ್ ಮಾಡಿದ 24 ಗಂಟೆಗಳ ನಂತರ ಅಪ್‌ಡೇಟ್ ಆಗುತ್ತಿದೆ. ಕೂಡಲೇ ಈ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ ಬಿಲ್ ಹಾಕಿದ ಕೂಡಲೇ ಪಡಿತರ ವಿತರಣೆಗೆ ಅವಕಾಶ ಮಾಡಿಕೊಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಚನ್ನಕೇಶವೇಗೌಡ, ಬಸವರಾಜ್, ದೇವರಾಜ್, ಸಿದ್ದೇಗೌಡ, ಎಂ.ಎಸ್ ಮಂಟೆಸ್ವಾಮಿ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!