Wednesday, August 12, 2026
Homeಕ್ರೈಮ್ಚಿಕ್ಕಮಗಳೂರು: ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪನ: ಸಂಕಷ್ಟಕ್ಕೆ ಸಿಲುಕಿರುವ ಕಾಫಿನಾಡಿನ ಯುವತಿ!

ಚಿಕ್ಕಮಗಳೂರು: ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪನ: ಸಂಕಷ್ಟಕ್ಕೆ ಸಿಲುಕಿರುವ ಕಾಫಿನಾಡಿನ ಯುವತಿ!

Telegram Group
Join Now

ಚಿಕ್ಕಮಗಳೂರು: ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದರ ನಡುವೆ ಸುನಾಮಿ ಆತಂಕ ಎದುರಾಗಿದೆ. ಇದರಿಂದಾಗಿ ಅಲ್ಲಿಗೆ ಮೆಡಿಕಲ್ ಕೋರ್ಸ್ ಓದಲು ತೆರಳಿದ್ದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಾಫಿನಾಡಿನ ಐಶ್ವರ್ಯ ಫಿಲಿಫೈನ್ಸ್‌ನ ಸಿಬು ನಗರದಲ್ಲಿ ಮೆಡಿಕಲ್ ಓದಲು ಹೋಗಿದ್ದರು. ಅವರು ಈಗಾಗಲೇ ಐದು ವರ್ಷಗಳ ವೈದ್ಯಕೀಯ ಕೋರ್ಸ್ ಅನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಆದರೆ, ಇತ್ತೀಚೆಗೆ ಕೇಂದ್ರ ಫಿಲಿಫೈನ್ಸ್ ಪ್ರದೇಶದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪ (ಸೆಪ್ಟೆಂಬರ್ 30, 2025 ರಂದು ವರದಿಯಾದಂತೆ) ಅಲ್ಲಿನ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ.

‌ಮಗಳನ್ನ ವಾಪಸ್ ಕರೆಸಿಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪೋಷಕರು ಮನವಿ ಮಾಡಿದ್ದಾರೆ. ಇನ್ನೂ ಹಲವು ಭಾರತೀಯ ವಿದ್ಯಾರ್ಥಿಗಳು ಭೂಕಂಪದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಊಟ, ತಿಂಡಿ, ನೀರು ಯಾವುದೂ ಸಿಗದೇ ಪರದಾಡುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.

ಭೂಕಂಪದಿಂದಾಗಿ ಕಟ್ಟಡಗಳು ಕುಸಿದು ಬಿದ್ದಿವೆ, ವಿದ್ಯುತ್ ಮತ್ತು ಸಂಪರ್ಕ ಕಡಿತಗೊಂಡಿದ್ದು, ಜನಜೀವನ ತೀವ್ರವಾಗಿ ಬಾಧಿತವಾಗಿದೆ. ಮುಖ್ಯವಾಗಿ, ಊಟ, ತಿಂಡಿ ಮತ್ತು ಕುಡಿಯುವ ನೀರು ಸಹ ಸಿಗದೇ ಐಶ್ವರ್ಯ ಸೇರಿದಂತೆ ಅಲ್ಲಿರುವ ಅನೇಕ ಭಾರತೀಯ ವಿದ್ಯಾರ್ಥಿಗಳು ಭಯ ಮತ್ತು ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ವಿಮಾನ ಸಂಚಾರ ಸೇರಿದಂತೆ ಎಲ್ಲ ವ್ಯವಸ್ಥೆಗಳು ಸ್ಥಗಿತಗೊಂಡಿರುವ ಕಾರಣ, ಐಶ್ವರ್ಯ ಅವರು ತಕ್ಷಣಕ್ಕೆ ವಾಪಸ್ ಬರಲಾಗದೇ ಸಿಬು ನಗರದಲ್ಲಿಯೇ ಸಿಲುಕಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments