ಚಿಕ್ಕಮಗಳೂರು: ಜೇನುಗೂಡಿಗೆ ವಿದ್ಯಾರ್ಥಿಯೊಬ್ಬ ಕಲ್ಲೆಸೆದು ಪರಿಣಾಮ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜೇನು ಕಚ್ಚಿರುವ ಘಟನೆ ಚಿಕ್ಕಮಗಳೂರಿನ ಮೌಂಟೇನ್ ವ್ಯೂ ಕಾಲೇಜಿನಲ್ಲಿ ನಡೆದಿದೆ.
ಜೇನು ಕಡಿತದಿಂದ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯ್ತು. ಒಬ್ಬ ವಿದ್ಯಾರ್ಥಿನಿಯರ ಪರಿಸ್ಥಿತಿ ಗಂಭೀರವಾಗಿದ್ದು, ವಿದ್ಯಾರ್ಥಿನಿಯನ್ನ ಹಾಸನದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಯಿಂದ ವಿದ್ಯಾರ್ಥಿಗಳ ಪೋಷಕರು, ಉಪನ್ಯಾಸಕರು ಅಘಾತಕ್ಕೆ ಒಳಗಾಗಿದ್ದು, ತಪ್ಪು ಮಾಡಿದ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
