Monday, August 4, 2025
!-- afp header code starts here -->
Homeಜಿಲ್ಲಾಸುದ್ದಿಚಿಕ್ಕಮಗಳೂರು: ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಚಿಕ್ಕಮಗಳೂರು: ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಚಿಕ್ಕಮಗಳೂರು:  ವಿದ್ಯಾರ್ಥಿಗಳು ಮತ್ತು ಯುವಜನತೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು ಎಂದು ಬಸವತತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ವಿದ್ಯಾರ್ಥಿ ದೆಸೆಯಲ್ಲಿ ಬಹಳಷ್ಟು ಆಕರ್ಷಣೆಗಳಿರುತ್ತವೆ. ಅವುಗಳ ಹಿಂದೆ ಹೋದರೆ ವಿದ್ಯಾಭ್ಯಾಸ ಮೊಟಕಾಗುತ್ತದೆ, ಬದುಕಿನ ಹಾದಿ ತಪ್ಪುತ್ತದೆ, ಜೀವನದ ಅಧಃಪತನವಾಗುತ್ತದೆ ಎಂದು ಎಚ್ಚರಿಸಿದರು.

ಇಂದು ಮಾದಕ ವಸ್ತುಗಳ ವ್ಯಾಪಾರಸ್ಥರು ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಗುರಿಯಾಗಿಸಿಕೊಂಡಿದ್ದಾರೆ, ಮೊಬೈಲ್‌ಗಳಲ್ಲೇ ಜೂಜಾಟದ ಆಪ್‌ಗಳಿವೆ, ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಯುವಜನತೆಗೆ ಜೂಜಾಟವಾಡುವಂತೆ ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತುಗಳ ಮೂಲಕ ಬಹಿರಂಗವಾಗಿಯೇ ಪ್ರೇರೇಪಿಸುತ್ತಿದ್ದಾರೆ, ಅಂಗಡಿಗಳಲ್ಲಿ ಗುಟ್ಕಾ, ತಂಬಾಕು, ಸಿಗರೇಟು, ಬೀಡಿ, ಮದ್ಯದಂತಹ ರಕ್ತ ಬೀಜಾಸುರರು ರಾರಾಜಿಸುತ್ತಿದ್ದಾರೆ, ವಿದ್ಯಾರ್ಥಿಗಳು ಮತ್ತು ಯುವಜನತೆ ಇವುಗಳ ವಿಷಯದಲ್ಲಿ ಅತ್ಯಂತ ಜಾಗರೂಕರಾಗಿರಬೇಕು, ಉತ್ತಮ ಭವಿಷ್ಯಕ್ಕಾಗಿ ಅವುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದರಿಂದ ಇನ್ನೂ ಹೆಚ್ಚಿನ ಸಾಧನೆಗೆ ಅವರನ್ನು ಪ್ರೇರೇಪಿಸಿದಂತಾಗುತ್ತದೆ ಎಂದು ತಿಳಿಸಿ ಸಖರಾಯಪಟ್ಟಣದ ಅವಧೂತರು ಹೇಳುತ್ತಿದ್ದ ಹಾಗೆ ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕೆ ಆಕರ್ಷಿತರಾಗದೇ ಶ್ರದ್ಧೆ, ಶಿಸ್ತು, ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಪರಿಸ್ಥಿತಿಯಲ್ಲೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು, ಒಂದು ಅವಕಾಶ ತಪ್ಪಿದರೆ ಇನ್ನೊಂದು ಅವಕಾಶದ ಬಾಗಿಲು ತೆರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಮಾತನಾಡಿ ನಗರದಲ್ಲಿ ಸರ್ಕಾರಿ ನೌಕರರ ಭವನದ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ಒದಗಿಸಿದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ೫೭೯ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲೆ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ರಾಜ್ಯ ಖಜಾಂಚಿ ವಿ.ವಿ. ಶಿವರುದ್ರಯ್ಯ, ಗೌರವಾಧ್ಯಕ್ಷ ಎಸ್.ಬಸವರಾಜು, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ಹಿರಿಯ ಉಪಾಧ್ಯಕ್ಷರಾದ ಸುರೇಶ ಸಿ.ಶಡಶ್ಯಾಳ, ಆರ್.ಮೋಹನ್‌ಕುಮಾರ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!