Wednesday, February 11, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಇಂದು ಮತ್ತು ನಾಳೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಲುಗಡೆಗೆ ನಿರ್ಬಂಧ!

ಚಿಕ್ಕಮಗಳೂರು: ಇಂದು ಮತ್ತು ನಾಳೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಲುಗಡೆಗೆ ನಿರ್ಬಂಧ!

ಚಿಕ್ಕಮಗಳೂರು: ಈದ್ ಮಿಲಾದ್ ಮತ್ತು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಸೆ.5 (ಇಂದು) ಮತ್ತು 6 ರಂದು (ನಾಳೆ) ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ ನಿರ್ಬಂಧಿಸಲಾಗಿದೆ.

ಈ ಎರಡೂ ದಿನಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ರಸ್ತೆ/ಮಾರ್ಗಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗವನ್ನು ಕಲ್ಪಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಸೆ.5 ರಂದು (ಇಂದು) ಈದ್ ಅಂಗವಾಗಿ ಹನುಮಂತಪ್ಪ ಸರ್ಕಲ್ ನಿಂದ ಪೋಸ್ಟ್ ಆಫೀಸ್ ಸರ್ಕಲ್ ವರೆಗೆ, ಎಂ.ಜಿ.ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ಮತ್ತು ನಿಲುಗಡೆ ಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಾಯ್ಡು ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ತೊಗರಿಹಂಕಲ್ ಸರ್ಕಲ್ ನಿಂದ ಹನುಮಂತಪ್ಪ ಸರ್ಕಲ್ ವರೆಗಿನ ಕೆ.ಎಂ. ರಸ್ತೆಯ ಬಲಬದಿಯಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ಮತ್ತು ಪಾರ್ಕಿಂಗ್ ಅನ್ನು ನಿಷೇಧಿಸಿದೆ.

ವರದಿ: ಶಾಲಿನಿ ಪಿ ಗೌಡ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!