Saturday, March 28, 2026
Homeಕ್ರೈಮ್ಚಿಕ್ಕಮಗಳೂರು: ಕಡೂರು ಮೂಲದ ಯೋಧ ರಾಜಸ್ಥಾನದಲ್ಲಿ ಸಾವು!

ಚಿಕ್ಕಮಗಳೂರು: ಕಡೂರು ಮೂಲದ ಯೋಧ ರಾಜಸ್ಥಾನದಲ್ಲಿ ಸಾವು!

ಕಡೂರು: ರಾಜಸ್ಥಾನದ  ಬಿಕಾನೇರ್‌ನಲ್ಲಿ ಗಡಿಭದ್ರತಾ ಪಡೆಯ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕಿನ ಜೋಡಿತಿಮ್ಮಾಪುರದ ಗಿರೀಶ್‌ (37) ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸೇವಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

18 ವರ್ಷಗಳಿಂದ ಗಡಿಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಶ್ರೀನಗರ, ಭೋಪಾಲ್‌, ಗುವಾಹಟಿ ಮತ್ತು ರಾಜಸ್ಥಾನದಲ್ಲಿ ಸೇವೆ ಸಲ್ಲಿಸಿದ್ದರು.

ಸೋಮವಾರ (ಡಿ. 8) ಸಂಜೆ ಕರ್ತವ್ಯದಲ್ಲಿರುವಾಗ ವಾಂತಿಯಾದ ಕಾರಣ ವಿಶ್ರಾಂತಿಗೆ ತೆರಳಿದ್ದರು. ಬಳಿಕ, ರಾತ್ರಿ ಕುಟುಂಬಸ್ಥರೊಂದಿಗೆ ವಿಡಿಯೊ ಕರೆಯಲ್ಲಿ ಮಾತನಾಡಿ, ‘ಏನೂ ಸಮಸ್ಯೆ ಇಲ್ಲ ಆರೋಗ್ಯವಾಗಿದ್ದೇನೆ. ಬೆಳಿಗ್ಗೆ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸುವೆ’ ಎಂದು ಮಾಹಿತಿ ನೀಡಿದ್ದರು.

ಆದರೆ, ಮಂಗಳವಾರ ಬೆಳಿಗ್ಗೆ ಬಿಎಸ್‌ಎಫ್‌ ಯುನಿಟ್‌ನವರು ಕುಟುಂಬದವರಿಗೆ ಕರೆ ಮಾಡಿ ಗಿರೀಶ್‌ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದು, ಕುಟುಂಬಸ್ಥರು ಇಲ್ಲಿಗೆ ಬರುವುದು ಬೇಡ. ಇಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿ, ಸಂಜೆ ಬೆಂಗಳೂರಿಗೆ ಮೃತದೇಹವನ್ನು ಕಳಿಸಲಾಗು ವುದು. ಅಲ್ಲಿಂದ ಬುಧವಾರ ಬೆಳಿಗ್ಗೆ ಆಂಬುಲೆನ್ಸ್‌ ಮೂಲಕ ಜೋಡಿತಿಮ್ಮಾಪುರಕ್ಕೆ ಮೃತದೇಹ ತರುವುದಾಗಿ ತಿಳಿಸಿದ್ದಾರೆ. ಅವರ ಸಾವಿಗೆ ಕಾರಣ ಈವರೆಗೆ ಖಚಿತವಾಗಿಲ್ಲ. ನಮ್ಮ ತೋಟದಲ್ಲಿ ಬುಧವಾರ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಮೃತರ ಸಹೋದರ ಸತೀಶ್‌ ತಿಳಿಸಿದರು.

ಅವರಿಗೆ ಪತ್ನಿ ಎಚ್‌.ಜಿ. ಅಭಿಲಾಷಾ, 9 ವರ್ಷದ ಪುತ್ರ, 6 ವರ್ಷದ ಪುತ್ರಿ, ತಂದೆ ದೂಸಯ್ಯನ ಬಸಪ್ಪ, ತಾಯಿ ಜಯಮ್ಮ ಇದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!