ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರೆದಿದ್ದು ಮತ್ತೋರ್ವ ಯುವಕ ಬಲಿಯಾಗಿರುವ ಘಟನೆ ನಡೆದಿದೆ.
ಹೌದು … ಮದನ್ (21) ಹೃದಯಾಘಾತದಿಂದ ಸಾವನ್ನಪ್ಪಿದ ಯುವಕನಾಗಿದ್ದು ಹಾಸನ ಹೊರವಲಯದ, ಚಿಕ್ಕಕೊಂಡಗುಳ ಗ್ರಾಮದಲ್ಲಿ ನಡೆದ ದುರ್ಘಟನೆಯಾಗಿದೆ.

ಮದನ್ ಮೂಲತಃ ಹಾಸನ ತಾಲ್ಲೂಕಿನ, ಚಿಟ್ನಳ್ಳಿ ಗ್ರಾಮದವನಾಗಿದ್ದುತಾಯಿ ಜೊತೆ ಚನ್ನಪಟ್ಟಣದಲ್ಲಿ ವಾಸವಿದ್ದ ಮದನ್, ಕಳೆದ ಎರಡು ದಿನಗಳಿಂದ ಚಿಕ್ಕಕೊಂಡಗುಳದ ಬಾವನ ಮನೆಗೆ ಬಂದಿದ್ದ ಮದನ್ ಮನೆಯಲ್ಲಿದ್ದ ವೇಳೆ ದಿಢೀರ್ ಕಾಣಿಸಿಕೊಂಡ ಎದೆನೋವು ರಾತ್ರಿ ಮನೆಯಲ್ಲಿಯೇ ಕುಸಿದು ಬಿದ್ದ ಮದನ್ ನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದ ಯುವಕ
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.