Advertisement

Homeಜಿಲ್ಲಾಸುದ್ದಿಹುಣಸೆಮಕ್ಕಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ: ಭತ್ತದ ಸಸಿ ನೆಡುವ ಮೂಲಕ ವಿನೂತನ ಪ್ರತಿಭಟನೆ

ಹುಣಸೆಮಕ್ಕಿ ಗ್ರಾಮದಲ್ಲಿ ಹದಗೆಟ್ಟ ರಸ್ತೆ: ಭತ್ತದ ಸಸಿ ನೆಡುವ ಮೂಲಕ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ಹುಣಸೆಮಕ್ಕಿ ಗ್ರಾಮದಲ್ಲಿ ರಸ್ತೆ ಹಲವು ವರ್ಷಗಳಿಂದ ದುರಸ್ತಿ ಕಾಣದೆ ಹದಗೆಟ್ಟಿದ್ದು, ಇದರಿಂದ ಗ್ರಾಮಸ್ಥರು ಬೇಸತ್ತು ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

 ಹೌದು .. ಈ ಘಟನೆ ವಸ್ತಾರೆ ಹೋಬಳಿಯ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮಕ್ಕಿ ಗ್ರಾಮದಲ್ಲಿ ನಡೆದಿದ್ದು ಗ್ರಾಮಸ್ಥರು ಬೇಸತ್ತು ರಸ್ತೆಯಲ್ಲಿ ಬತ್ತದ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ಹಾಗೆ ಈ ವೇಳೆ ಗ್ರಾಮಸ್ಥರು ಮಾತನಾಡಿ ಮಳೆಗಾಲದಲ್ಲಿ ಓಡಾಡಲು ತೀವ್ರ ತೊಂದರೆಯಾಗುತ್ತಿದೆ, ವಿದ್ಯಾ ರ್ಥಿಗಳು ಶಾಲೆಗೆ ತೆರಳಲು, ರೋಗಿಗಳು ಆಸ್ಪತ್ರೆಗೆ ತೆರಳಲು ಹರಸಾಹಸ ಪಡಬೇಕಿದೆ ಎಂದರು.

ನಾವು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಉಡಾಫೆ ಉತ್ತರ ನೀಡುತ್ತಾರೆ, ಈವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿಲ್ಲ, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿ ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಗ್ರಾಮಸ್ಥರಾದ ರಮೇಶ್, ಲೋಕೇಶ್, ರಾಜು, ಸಂಕೇತ್, ಕೆಂಚಯ್ಯ, ಚಂದ್ರಯ್ಯ, ಸೋಮಶೇಖರ್, ಶಂಕರ್, ಶಿವಣ್ಣ, ನವೀನ್, ಮನು, ಸುನಿಲ್, ಮಂಜುನಾಥ್, ರಘು, ಗಿರೀಶ್, ಚಂದ್ರ ಶೇಖರ್, ಸಂದೀಪ್, ಸಿದ್ದೇಶ್, ಪರಮೇಶ್, ಲೋಕಯ್ಯ, ಅಣ್ಣಪ್ಪ, ಮಂಜುನಾಥ್, ರವಿ, ಕಮಲ್, ರಮೇ ಶ್, ಪೂರ್ಣೇಶ್, ರೆಮತ್, ಜಯಪ್ಪ, ತಿಪ್ಪೇಶ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!