Tuesday, August 11, 2026
Homeಜಿಲ್ಲಾಸುದ್ದಿಕೊಪ್ಪ ತಾಲೂಕಿನ ಸುತ್ತಮುತ್ತ ಗ್ರಾಮಗಳಿಗೆ ಆನೆಗಳು ದಾಳಿ: ಬೆಳೆ, ಬೈಕ್‌ ಹಾನಿ

ಕೊಪ್ಪ ತಾಲೂಕಿನ ಸುತ್ತಮುತ್ತ ಗ್ರಾಮಗಳಿಗೆ ಆನೆಗಳು ದಾಳಿ: ಬೆಳೆ, ಬೈಕ್‌ ಹಾನಿ

Telegram Group
Join Now

ಜಯಪುರ: ಕೊಪ್ಪ ತಾಲ್ಲೂಕಿನ ಸುತ್ತಮುತ್ತ ಗ್ರಾಮಗಳಿಗೆ ಆನೆಗಳು ದಾಳಿ ಮಾಡಿ ಬೆಳೆ ಹಾಗೂ ಬೈಕ್‌ ಹಾನಿ ಮಾಡಿವೆ.

ಹೌದು .. ಕೊಪ್ಪ ತಾಲ್ಲೂಕಿನ ಲೋಕನಾಥಪುರ ಸಮೀಪದ ಕೋಣಂಬಿ ಹಾಗೂ ಹೇರೂರು ಗ್ರಾಮದ ಹುತ್ತಿನಗದ್ದೆಯ ನಟರಾಜ್ ಅವರ ತೋಟದಲ್ಲಿ ಎರಡು ಆನೆಗಳು ಬೆಳೆದಿದ್ದ ಅಡಿಕೆ, ಬಾಳೆ, ಕಾಫಿ ಗಿಡಗಳನ್ನು ತುಳಿದು ನಾಶ ಮಾಡಿವೆ. ಸಮೀಪದ ಸೈಟ್ ಬಳಿ ನಿಲ್ಲಿಸಿದ್ದ ಬೈಕನ್ನು ತುಳಿದು ಜಖಂಗೊಳಿಸಿವೆ.

ಸ್ಥಳಕ್ಕೆ ಕೊಪ್ಪ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಆನೆಗಳನ್ನು ಓಡಿಸಲು ಯತ್ನಿಸಿದ್ದಾರೆ. ಲೋಕನಾಥಪುರ ಸಮೀಪದ ಕೋಣಂಬಿ ಶ್ರೀಕರ, ನಾಗರಾಜ್, ಗುರುಪ್ರಸನ್ನ ಅವರ ಬೆಳೆ ಹಾನಿಯಾಗಿದೆ.

ಅಧಿಕಾರಿಗಳು ಬೆಳೆಹಾನಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪ್ರಾಣ ಹಾನಿಯಾದರೆ ಯಾರು ಜವಾಬ್ದಾರಿ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments