ಮೂಡಿಗೆರೆ: ತಾಲೂಕಿನ ಛತ್ರ ಮೈದಾನದಲ್ಲಿ ಸೆ.16ರಂದು ಉಚಿತ ನೇತ್ರ ತಪಾಸಣಾ ಹಾಗೂ ನೇತ್ರ ಶಸ್ತ್ರಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ.
ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ, ಪ್ರಶಾಂತ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ಚಿಕ್ಕಮಗಳೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ.
ಛತ್ರ ಮೈದಾನ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುವ ಶಿಬಿರದಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆಗೆ ಆಯ್ಕೆ ಹಾಗೂ ಮಸೂರ (IOL) ಅಳವಡಿಕೆ ಸೇರಿದಂತೆ ಅಗತ್ಯ ನೇತ್ರ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗುವುದು.
ಸೆ.16ರಂದು ಬುಧವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ದತ್ತ ಮೈದಾನ, ಮೂಡಿಗೆರೆಯಲ್ಲಿ ಶಿಬಿರ ನಡೆಯಲಿದೆ. ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ ರೋಗಿಗಳನ್ನು ಶಿಬಿರದ ದಿನವೇ ವೈದ್ಯರೊಂದಿಗೆ ಕರೆದೊಯ್ಯಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ನೇತ್ರ ಸಮಸ್ಯೆ ಇರುವವರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.
