ಹಾಸನ: ವಿದ್ಯಾನಗರ ಬುದ್ಧಮಾರ್ಗದಲ್ಲಿರುವ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ವಿದ್ಯಾನಗರ ಗೆಳೆಯರ ಹಾಗೂ ಯುವಕರ ಬಳಗದ ಆಶ್ರಯದಲ್ಲಿ ಆಯೋಜಿಸಿದ್ದ 25ನೇ ವರ್ಷದ ಬೆಳ್ಳಿ ಮಹೋತ್ಸವದಲ್ಲಿ ಮೈಸೂರು ಪೊಲೀಸ್ ಶ್ರೇಣಿಯ ಮಹಾನಿರೀಕ್ಷಕರಾದ ಬೋರಲಿಂಗಯ್ಯ ಐಪಿಎಸ್ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ ಗೌರವ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಮಿತಿ ವತಿಯಿಂದ ಅವರಿಗೆ ಸನ್ಮಾನ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಿತಿ ಪದಾಧಿಕಾರಿಗಳು ಹಾಗೂ ಸ್ಥಳೀಯ ಯುವಕರು ಭಾಗವಹಿಸಿದ್ದರು. ಸಮಿತಿಯು ಕಳೆದ 25 ವರ್ಷಗಳಿಂದ ಗಣೇಶೋತ್ಸವವನ್ನು ಶಿಸ್ತಿನಿಂದ ಹಾಗೂ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳ ಮೂಲಕ ಆಚರಿಸುತ್ತಿದ್ದು, ಈ ಬಾರಿ ಬೆಳ್ಳಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮದಲ್ಲಿ ಸಮಿತಿ ಸದಸ್ಯರು ಬೋರಲಿಂಗಯ್ಯ ಐಪಿಎಸ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.
