Wednesday, August 12, 2026
Homeಕ್ರೈಮ್ಹಾಸನ: ಹಿರಿಯೂರು ಬಳಿ ಭೀಕರ ಬಸ್ ಅಪಘಾತ: ಹಾಸನದ ಇಬ್ಬರು ಯುವತಿಯರು ಕಣ್ಮರೆ!

ಹಾಸನ: ಹಿರಿಯೂರು ಬಳಿ ಭೀಕರ ಬಸ್ ಅಪಘಾತ: ಹಾಸನದ ಇಬ್ಬರು ಯುವತಿಯರು ಕಣ್ಮರೆ!

Telegram Group
Join Now

ಹಾಸನ: ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.

ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್‌ ಇಂಜಿನಿಯರ್‌ (Techie) ಆಗಿ ಕೆಲಸ ಮಾಡುತ್ತಿದ್ದರು.

ಬೆಂಗಳೂರಿನಿಂದ ಬುಧವಾರ ರಾತ್ರಿ ಸ್ನೇಹಿತೆ ಮಿಲನ ಜೊತೆ ಬಸ್ ಹತ್ತಿ ಹೊರಟಿದ್ದರು. ಮಿಲನ ಗಾಯಗೊಂಡಿದ್ದು, ಚಿಕಿತ್ಸೆ ಪಡಿಯುತ್ತಿದ್ದಾರೆ. ಉಳಿದ ಇಬ್ಬರು ಕಣ್ಮರೆಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments