Wednesday, July 8, 2026
Homeಜಿಲ್ಲಾಸುದ್ದಿಹಾಸನ: ಭಾರೀ ಮಳೆಗೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ :ವಾಹನ ಸವಾರರ ಪರದಾಟ!

ಹಾಸನ: ಭಾರೀ ಮಳೆಗೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ :ವಾಹನ ಸವಾರರ ಪರದಾಟ!

Telegram Group
Join Now

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತ ಹಿನ್ನೆಲೆ ವಾಹನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. 

ಭೂಕುಸಿತ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಆಗಿದ್ದು, ನೂರಾರು ವಾಹನಗಳು ರಸ್ತೆ ಮಧ್ಯೆ ನಿಂತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments