ಹಾಸನ : ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಶ್ರೀ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಇಂದು ದೇವಾಲಯಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಸಂಸದರಾದ ಶ್ರೇಯಸ್ ಎಂ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಟೇಲ್ ಶಿವಪ್ಪ, ಡಿ.ಐ.ಜಿ. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರರು ಹಾಜರಿದ್ದರು.,
ಹಾಸನ : ಅ.9 ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ
- ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
- ಸಿದ್ದತೆಗಳನ್ನು ಪರಿಶೀಲಿಸಿದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ
- ದೇವಾಲಯದ ಒಳಗೆ, ಹೊರಗೆ ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವರು
- ಬ್ಯಾರಿಕೇಡ್ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ, ವಾರ್ ರೂಂ ಸೇರಿದಂತೆ ಈಗಾಗಲೇ ಪೂರ್ಣಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವರು
- ದಕ್ಷಿಣ ವಲಯ ಡಿಐಜಿ ಬೋರಲಿಂಗಯ್ಯ, ಡಿಸಿ ಕೆ.ಎಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜೀತಾ, ಎಸಿ ಮಾರುತಿ ಉಪಸ್ಥಿತಿ
