Sunday, July 26, 2026
Homeಜಿಲ್ಲಾಸುದ್ದಿಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ!

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ!

Telegram Group
Join Now

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಏಕಾಏಕಿ ಅಸ್ವಸ್ಥಗೊಂಡು ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ಕೂಡಲೇ ನೆರವಿಗೆ ಧಾವಿಸಿ ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಶಿಕ್ಷಕರ ಅಕಾಲಿಕ ನಿಧನದಿಂದ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments