ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಹಾಲಿ ಶಾಸಕ ಟಿ.ಡಿ ರಾಜೇಗೌಡ ಅವರಿಗೆ ಹೈ ಕೋರ್ಟ್ ನಲ್ಲಿ ಮತ್ತೊಮ್ಮೆ ತೀವ್ರ ಹಿನ್ನಡೆಯಾಗಿದೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಯಲ್ಲಿ ಲೋಪ ಹಾಗೂ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಜಿ ಸಚಿವ ಡಿ.ಎನ್ ಜೀವರಾಜ್ ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಅಪೀಲನ್ನು ಪ್ರಶ್ನಿಸಿ ಹಾಲಿ ಶಾಸಕ ಟಿ.ಡಿ ರಾಜೇಗೌಡ ಅರ್ಜಿ ಸಲ್ಲಿಸಿ 2 ಬಾರಿ ಸುಪ್ರೀಂ ಕೋರ್ಟ್ ಹಾಗೂ 2 ಬಾರಿ ಹೈ ಕೋರ್ಟ್ ನಲ್ಲಿ ಹಿನ್ನಡೆ ಅನುಭವಿಸಿದ್ದರು.
ಈಗ ಪುನಃ ಹೈ ಕೋರ್ಟ್ ನಲ್ಲಿ ಕೇಸ್ ವಜಾಕ್ಕೆ ಕೇಳಿದ ರಾಜೇಗೌಡರ ಅರ್ಜಿ ತಿರಸ್ಕೃತಗೊಂಡಿದ್ದು ಇದರಿಂದ ಮತ್ತೊಮ್ಮೆ ರಾಜೇಗೌಡರಿಗೆ ತೀವ್ರ ಹಿನ್ನಡೆಯಾಗಿದೆ
