ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ- ದೇವನೂರು ಮಾರ್ಗದಲ್ಲಿ ನಡೆದಿದೆ.
ಹೌದು ರಸ್ತೆ ಕಾಮಗಾರಿಯನ್ನು ಅವೈಜ್ಞಾನಿಕ ನಡೆಸಿರುವುದಕ್ಕೆ ಇದೇ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನಾ ಸ್ಥಳದಲ್ಲಿ ಆಳವಾದ ಕಂದಕಗಳು ಗುಂಡಿಗಳು ಹಾಘೆ ತಿರುವುಗಳು ಇದ್ದು ಯಾವುದೇ ಸೂಚನಾ ಫಲಕ ಹಾಕಿಲ್ಲ ಎಚ್ಚರಿಕ ಫಲಕಗಳನ್ನು ಅಳವಡಿಸದ ಕಾರಣ ಪಿಕಪ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ರ್ಸತೆ ಕಾಮಗಾರಿಯನ್ನು ಪೂರ್ಣಗೊಳಿಸಿದ ಬಳಿಕ ಸುರಕ್ಷಿತ ಕ್ರಮವಾಗಿ ಕ್ರಮವನ್ನು ಅನುಸರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಘಟನಾ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
