Saturday, August 8, 2026
Homeಜಿಲ್ಲಾಸುದ್ದಿKalasa: ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆ: ಕಿ.ಮೀ.ಗಟ್ಟಲೇ ಟ್ರಾಫಿಕ್...

Kalasa: ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆ: ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್

Telegram Group
Join Now

ಕಳಸ: ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಿ ಕೀ ಸಮೇತ ಚಾಲಕ ನಾಪತ್ತೆಯಾಗಿದ್ದು ಕಿ.ಮೀ.ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಬಳಿ ನಡೆದಿದೆ.

ಕಳಸದಿಂದ ಮಂಗಳೂರು ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಲಾರಿ ಚಾಲಕ ಲಾರಿ ನಿಲ್ಲಿಸಿ ಕೀ ಸಮೇತ ನಾಪತ್ತೆಯಾಗಿದ್ದಾನೆ. ಇದರಿಂದ ಸುರಿಯುತ್ತಿರುವ ಮಳೆ ಮಧ್ಯೆ ರಸ್ತೆಯ ಎರಡು ಕಡೆಗಳಲ್ಲಿ ಕಿ.ಮೀ.ಗಟ್ಟಲೇ ನೂರಾರು ವಾಹನಗಳು ಸರದಿ ಸಾಲಿನಲ್ಲಿ ನಿಂತಿದ್ದವು.

ಲಾರಿ ಚಾಲಕ ಲಾರಿಯ ಮಾಲೀಕನ ಬಳಿ 6 ಸಾವಿರ ರೂ. ಹಣ ಹಾಕಿಸಿಕೊಂಡು ರಸ್ತೆ ಮಧ್ಯೆಯೇ ಲಾರಿ ಬಿಟ್ಟು ಓಡಿಹೋಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಕುದುರೆಮುಖ ಪೊಲೀಸರು ಲಾರಿಯನ್ನು ತೆಗೆಯಲಾಗದೆ ಮಾಲೀಕನಿಗೆ ಕರೆ ಮಾಡಿ ಕೂಡಲೇ ಬೇರೆ ಚಾಲಕರನ್ನ ಕಳುಹಿಸುವಂತೆ ಸೂಚನೆ ನೀಡಿದ್ದಾರೆ. ಲಾರಿ ಚಾಲಕನಿಗಾಗಿ ಕುದುರೆಮುಖ ಪೊಲೀಸರು ಶೋಧ ನಡೆಸಿದ್ದಾರೆ. ಆದರೆ, ಲಾರಿ ಚಾಲಕ ಪತ್ತೆಯಾಗಿಲ್ಲ.

ಕಳಸ – ಕುದುರೆಮುಖ ಮಾರ್ಗದಲ್ಲಿ ಮೂರು ಅಪಾಯಕಾರಿ ಹಳೆಯ ಸೇತುವೆಗಳಿವೆ. ಭಾರಿ ಪ್ರಮಾಣದ ಭಾರ ಹೊತ್ತಿರುವ ದೊಡ್ಡ ಲಾರಿಗಳನ್ನು ಈ ಮಾರ್ಗದಲ್ಲಿ ಬಿಟ್ಟಿರುವುದಕ್ಕೆ ಸ್ಥಳೀಯರು ಕೂಡ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮೂರರಲ್ಲಿ ಒಂದೇ ಒಂದು ಸೇತುವೆ ಕಳಚಿ ಬಿದ್ದರೂ ಕೂಡ ಕಳಸ ಹಾಗೂ ಕುದುರೆಮುಖ ಸಂಪರ್ಕ ಸಂಪೂರ್ಣ ಬಂದ್ ಆಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments