Wednesday, June 10, 2026
Homeಜಿಲ್ಲಾಸುದ್ದಿ‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ: ಶಾರದಾಂಬಾ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ದೇಶಕ...

‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ: ಶಾರದಾಂಬಾ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಿರ್ದೇಶಕ ಪ್ರೇಮ್ & ರಕ್ಷಿತಾ!


ಖ್ಯಾತ ನಟ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದು ಬಾಕ್ಸಾಫೀಸ್‌ನಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈ ಸಂಭ್ರಮದ ಬೆನ್ನಲ್ಲೇ ಚಿತ್ರದ ನಿರ್ದೇಶಕ ಪ್ರೇಮ್ ಹಾಗೂ ರಕ್ಷಿತಾ ದಂಪತಿ ಶೃಂಗೇರಿಯ ಶಾರದಾಂಬಾ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸಿನಿಮಾದ ಯಶಸ್ಸಿಗೆ ಕೃತಜ್ಞತೆ ಸಲ್ಲಿಸಲು ಮಲೆನಾಡಿನ ಪವಿತ್ರ ಕ್ಷೇತ್ರಕ್ಕೆ ಆಗಮಿಸಿದ ದಂಪತಿಗಳು, ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ನಡೆಸಿದರು. ಏಪ್ರಿಲ್ 30ರಂದು ತೆರೆಕಂಡ ಈ ಚಿತ್ರವು ಈಗಾಗಲೇ 12 ದಿನಗಳನ್ನು ಪೂರೈಸಿದ್ದು, ಆರಂಭದ ಸಣ್ಣಪುಟ್ಟ ಅಡೆತಡೆಗಳ ಹೊರತಾಗಿಯೂ ದೊಡ್ಡ ಮಟ್ಟದ ಕಲೆಕ್ಷನ್ ಮಾಡುತ್ತಿದೆ.

ಸಂಜಯ್ ದತ್ ಹಾಗೂ ಶಿಲ್ಪಾ ಶೆಟ್ಟಿ ಅವರಂತಹ ದೊಡ್ಡ ತಾರಾಗಣವಿರುವ ಈ ಚಿತ್ರದ ಯಶಸ್ಸಿಗಾಗಿ ಶೃಂಗೇರಿ ಪೀಠದಲ್ಲಿ ಅರ್ಚನೆ ಮಾಡಿಸುವ ಮೂಲಕ ಪ್ರೇಮ್ ದಂಪತಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

ಧ್ರುವ ಸರ್ಜಾ ಅವರ ಮಾಸ್ ಲುಕ್ ಮತ್ತು ಪ್ರೇಮ್ ಅವರ ಮೇಕಿಂಗ್ ಶೈಲಿಗೆ ಈಗ ಶಾರದಾಂಬೆಯ ಕೃಪೆಯೂ ತೋರಿದ್ದು, ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ದಾಖಲೆಗಳನ್ನು ಬರೆಯುವ ನಿರೀಕ್ಷೆಯಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!