ಕೊಪ್ಪ: ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಸ್ರಿಕಟ್ಟೆಯಲ್ಲಿ ನಡೆದಿದೆ.
ಹೌದು .. ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ ನಡೆಸಲು ಪ್ರಯತ್ನಿಸಿದಾಗ ಶಿಕ್ಷಕಿ ಕೂಗಿಕೊಂಡಾಗ ರಕ್ಷಣೆ ಮಾಡಿದ ಸ್ಥಳೀಯರು
ಘಟನಾ ಸಂಬಂಧ ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಆರೋಪಿಯ ಶೋಧಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಶಿಕ್ಷಕಿಗೆ ಶಿವಮೊಗ್ಗದಲ್ಲಿ ಚಿಕಿತ್ಸೆ ನೀಡಲಾಗಿದ್ದು ಕೂಡಲೇ ಆರೋಪಿಯನ್ನು ಬಂಧಿಸುವಂತೆ ಸ್ಥಳೀಯರು ಆಗ್ರಹ ಪಡಿಸಿದ್ದಾರೆ.
