ಕೊಪ್ಪ: ಅತಿಥಿ ಉಪನ್ಯಾಸಕರ ಸಮಸ್ಯೆಯನ್ನ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನಾ ಜಾಥಾ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ಕಾಲೇಜು ಆರಂಭವಾಗಿ ಒಂದು ತಿಂಗಳಾದರೂ ಕೂಡ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿಲ್ಲ.
ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೊಪ್ಪ ವತಿಯಿಂದ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನ ಖಂಡಿಸಿ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನಾ ಜಾಥಾ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
