ಮೂಡಿಗೆರೆ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಹೌದು.. ಚಾರ್ಮಾಡಿ ಘಾಟ್ನಲ್ಲಿ ಇತ್ತೀಚೆಗೆ ಚಿರತೆಯೊಂದು ರಸ್ತೆ ಬದಿಯಲ್ಲಿ ಓಡಾಡುತ್ತಿರುವ ಮತ್ತು ರಸ್ತೆ ದಾಟುತ್ತಿರುವ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿವೆ. ಈ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ವಾಹನ ಸವಾರರು ಮತ್ತು ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿವೆ
ವಾಹನ ಸವಾರರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚಿಸಿದೆ.
