Thursday, February 12, 2026
Homeಕ್ರೈಮ್ಮೇಲ್ಪಾಲ್: ಗೊಬ್ಬರದ ಮೂಟೆ ಮೈಮೇಲೆ ಬಿದ್ದು ಯುವಕ ಸಾವು!

ಮೇಲ್ಪಾಲ್: ಗೊಬ್ಬರದ ಮೂಟೆ ಮೈಮೇಲೆ ಬಿದ್ದು ಯುವಕ ಸಾವು!

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಗೇರುಬೈಲು ಗ್ರಾಮದಲ್ಲಿ ಗೊಬ್ಬರದ ಮೂಟೆ ಮೈಮೇಲೆ ಬಿದ್ದು ಕರ್ಕೇಶ್ವರ ಗ್ರಾಮದ ಮೇಲ್ಪಾಲ್ ಪೂರ್ಣೇಶ್ (27) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೇಲ್ಪಾಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಗೊಬ್ಬರ ಪಡೆದು ಖಾಸಗಿ ಎಸ್ಟೇಟ್‌ಗೆ ನೀಡಲು ಪಿಕಪ್‌ನಲ್ಲಿ ತೆರಳಿದ್ದರು. ಗೊಬ್ಬರದ ಮೂಟೆಗಳನ್ನು ವಾಹನದಿಂದ ಇಳಿಸುವಾದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ.

ಅವರು ಹೊತ್ತಿದ್ದ ಗೊಬ್ಬರದ ಮೂಟೆ ಅವರ ಕುತ್ತಿಗೆಯ ಮೇಲೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಸಹೋದರಿ ಪೂರ್ಣಿಮಾ ಪೊಲೀಸರಿಗೆ ದೂರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!