Saturday, February 7, 2026
Homeಜಿಲ್ಲಾಸುದ್ದಿಮಾಜಿ ಗ್ರಾ.ಪಂ. ಉಪಾಧ್ಯಕ್ಷನಿಂದ ಸರ್ಕಾರಿ ಜಾಗ ಒತ್ತುವರಿ ಆರೋಪ: ತೆರವಿಗೆ ಬೆಟ್ಟದಮನೆ ಗ್ರಾಮಸ್ಥರ ಆಗ್ರಹ

ಮಾಜಿ ಗ್ರಾ.ಪಂ. ಉಪಾಧ್ಯಕ್ಷನಿಂದ ಸರ್ಕಾರಿ ಜಾಗ ಒತ್ತುವರಿ ಆರೋಪ: ತೆರವಿಗೆ ಬೆಟ್ಟದಮನೆ ಗ್ರಾಮಸ್ಥರ ಆಗ್ರಹ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಹೋಬಳಿಯ ಬೆಟ್ಟದಮನೆ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗವನ್ನು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರೊಬ್ಬರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಜಾಗವನ್ನು ತಕ್ಷಣವೇ ತೆರವುಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಘಟನೆಯ ವಿವರ: ಬೆಟ್ಟದಮನೆ ಗ್ರಾಮದ ಸರ್ವೆ ನಂಬರ್ 120ರಲ್ಲಿರುವ ಸರ್ಕಾರಿ ಗೋಮಾಳ ಜಾಗವನ್ನು ಈ ಹಿಂದೆ ಗ್ರಾಮಸ್ಥರು ಸರ್ವೇ ಮಾಡಿಸಿ, ಸಾರ್ವಜನಿಕ ಉಪಯೋಗಕ್ಕಾಗಿ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದ್ದರು. ಆದರೆ, ಅದೇ ಗ್ರಾಮದ ಬಿ.ಕೆ. ಚಂದ್ರಶೇಖರ್ ಎಂಬುವರು ಈ ಜಾಗವನ್ನು ಒತ್ತುವರಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇತ್ತೀಚೆಗೆ ಅವರು ಈ ಜಾಗಕ್ಕೆ ಬೇಲಿ ನಿರ್ಮಿಸಲು ಮುಂದಾದಾಗ ಗ್ರಾಮಸ್ಥರು ಒಗ್ಗೂಡಿ ತಡೆದಿದ್ದಾರೆ.

ಪಂಚಾಯಿತಿಗೆ ಮನವಿ: ಗ್ರಾಮ ಪಂಚಾಯಿತಿಗೆ ಸೇರಿದ ಈ ಜಾಗವನ್ನು ಕೂಡಲೇ ಅಧಿಕೃತವಾಗಿ ಸರ್ವೇ ಮಾಡಿಸಬೇಕು ಮತ್ತು ಸಾರ್ವಜನಿಕ ಉದ್ದೇಶಗಳಿಗಾಗಿ ಮೀಸಲಿಡಬೇಕು ಎಂದು ಆಗ್ರಹಿಸಿ ಕಿರುಗುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಕೃಷ್ಣಪ್ಪ ಅವರಿಗೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು. ಒತ್ತುವರಿ ಮಾಡಿರುವ ಬೇಲಿಯನ್ನು ತೆರವುಗೊಳಿಸಿ, ಸರ್ಕಾರಿ ಆಸ್ತಿಯನ್ನು ರಕ್ಷಿಸಬೇಕೆಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಈ ಪ್ರತಿಭಟನಾ ಮನವಿ ಸಲ್ಲಿಕೆಯ ಸಂದರ್ಭದಲ್ಲಿ ಗ್ರಾಮಸ್ಥರಾದ ಪರಮೇಶ್, ಪ್ರದೀಪ್, ಅರುಣ್ ಕುಮಾರ್, ಸುಂದ್ರೇಶ್, ಕಿರಣ್, ಅರುಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!