Thursday, March 26, 2026
Homeಜಿಲ್ಲಾಸುದ್ದಿಮೂಡಿಗೆರೆ: ಅತ್ಯಾಚಾರ, ಕೊಲೆ ಖಂಡಿಸಿ ದಲಿತ ಸಂಘಟನ ಸಮಿತಿ ವತಿಯಿಂದ ಪ್ರತಿಭಟನೆ

ಮೂಡಿಗೆರೆ: ಅತ್ಯಾಚಾರ, ಕೊಲೆ ಖಂಡಿಸಿ ದಲಿತ ಸಂಘಟನ ಸಮಿತಿ ವತಿಯಿಂದ ಪ್ರತಿಭಟನೆ

ಮೂಡಿಗೆರೆ: ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಹಾಗೂ ಹಲವು ಯುವತಿಯರ ಮೇಲಿನ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದಲಿತ ಸಂಘಟನ ಸಮಿತಿ ಮೂಡಿಗೆರೆ ಇವರ ವತಿಯಿಂದ ಪ್ರತಿಭಟನೆ ನಡೆಸಿ ತಾಲೂಕು ದಂಡಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಲಿತ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷ ಸುಂದ್ರೇಶ್ ಹೊಯ್ಸಳಲು ಮಾತನಾಡಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಕುಮಾರಿ ಸೌಜನ್ಯ ಸಾವಿಗೆ ಕಾರಣರಾದ ಕಿಚಕರನ್ನು ಈ ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕು.ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು

ಈ ಸಂದರ್ಭದಲ್ಲಿ ದಲಿತ ಸಂಘಟನ ಸಮಿತಿ ಗೌರವ ಅಧ್ಯಕ್ಷ ಪೂವಪ್ಪ ಆನೆದಿಬ್ಬ, ತಾಲ್ಲೂಕು ಅಧ್ಯಕ್ಷ ಪೂರ್ಣೇಶ್ ಬೆಟ್ಟದಮನೆ, ಕಾರ್ಯ ಅಧ್ಯಕ್ಷ ಇಂದ್ರೇಶ್, ರಮೇಶ್ ತುದಿಹಾಲ, ಮಹಿಳಾ ಘಟಕದ ಅಧ್ಯಕ್ಷೇ ವೀಣಾ ರಮೇಶ್,ಉಪಾಧ್ಯಕ್ಷೆ ಪ್ರತಿಮಾ ಚೇಗೂ, ಚಂದ್ರಶೇಖರ್ ಪೂರ್ಣಿಮಾ, ಸುನಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!