Monday, February 9, 2026
Homeಆರೋಗ್ಯಮೂಡಿಗೆರೆ : ಹೊಯ್ಸಳ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡಿಗೆರೆ : ಹೊಯ್ಸಳ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮೂಡಿಗೆರೆ : ಹೊಯ್ಸಳ ಹೆಲ್ತ್ ಸೆಂಟರ್ ಹಾಗೂ ರೋಟರಿ ಸಂಸ್ಥೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ಮತ್ತು ಹೊಯ್ಸಳ ಯೋಗಕ್ಷೇಮ ವಾಹನ ಲೋಕಾರ್ಪಣೆ ಕಾರ್ಯಕ್ರಮವನ್ನು ಜೆ ಸಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು.

​ಪಟ್ಟಣದ ಜೆ ಸಿ ಹಾಲ್ ನಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ. ಟಿ. ರವಿ ಉತ್ತಮ ಆರೋಗ್ಯಕ್ಕಾಗಿ ಉತ್ತಮ ಆಹಾರ ಸೇವನೆಯ ಜೊತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಪ್ರತಿದಿನ ಹೆಚ್ಚು ನಡೆದಾಡುವ ಅಭ್ಯಾಸ ರೂಢಿಸಿ ವ್ಯಾಯಾಮ ಮಾಡುವುದರಿಂದ ಆರೋಗ್ಯ ಉತ್ತಮಪಡಿಸಿಕೊಳ್ಳಬಹುದು ಎಂದರು.

ಹೊಯ್ಸಳ ಹೆಲ್ತ್ ಕೇರ್ ಆಡಳಿತ ನಿರ್ದೇಶಕಿ ಡಾ.ಅರ್ಪಿತಾ ಸಿಂಹ ಮಾತನಾಡಿ ಇಂತಹ ಆರೋಗ್ಯ ಶಿಬಿರ ಹೆಚ್ಚು ನಡೆಯಬೇಕು. ಇದರಿಂದ ಇಲ್ಲಿನ ಪ್ರದೇಶದ ಜನಸಾಮಾನ್ಯರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸಾಧ್ಯ ಎಂದರು.

ಎಲ್ಲಾ ವಯೋಮಾನದವರು, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರು ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ವೃದ್ಧಿ ಕಡೆ ಗಮನ ಹರಿಸುವಂತೆ ತಿಳಿಸದರು

ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನ ಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ. ಪಿ. ಕುಮಾರಸ್ವಾಮಿ ಮಾತನಾಡಿ ಹಳ್ಳಿ ಭಾಗದ ಜನ ಸಾಮಾನ್ಯರಿಗೆ ಉಚಿತ ಆರೋಗ್ಯ ಶಿಬಿರ ಅನುಕೂಲಕಾರಿಯಾಗಿದೆ. ಬಡ ವರ್ಗದ ಜನರು ಹಣದ ಸಮಸ್ಸೆಯ ಕಾರಣದಿಂದ ಆರೋಗ್ಯ ನಿರ್ಲಕ್ಷಿಸುತ್ತಿದ್ದೂ ಇಂತಹ ಶಿಬಿರಗಳನ್ನು ಸದುಪಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುರುಳಿ ಕೃಷ್ಣ ಇರ್ವತಾಯ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ವಿವಿಧ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ ಆಯೋಜಿಸಲ್ಪಟ್ಟಿದ್ದು, ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆಗಳನ್ನು ಒದಗಿಸುತವ ಮುಖ್ಯ ಉದ್ದೇಶವಾಗಿದೆ ಎಂದರು

ಈ ಶಿಬಿರಗಳಲ್ಲಿ ಸಾಮಾನ್ಯ ತಪಾಸಣೆ, ತಜ್ಞ ವೈದ್ಯರ ಸಮಾಲೋಚನೆ ಮತ್ತು ಅಗತ್ಯವಿದ್ದಲ್ಲಿ ಮುಂದಿನ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆಗೆ ರಿಯಾಯಿತಿ ದರದಲ್ಲಿ ಅವಕಾಶ ನೀಡಲಾಗುತ್ತದೆ. ಇದು ಸಮಾಜದ ವಿವಿಧ ವರ್ಗದ ಜನರಿಗೆ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಪ್ರಯೋಜನಕಾರಿಯಾಗಿದೆ ಎಂದರು

ಶಿಬಿರಗಳಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಪರಿಣಿತ ವೈದ್ಯರಿಂದ ವೈಯಕ್ತಿಕ ಸಲಹೆ ಮತ್ತು ಆರೋಗ್ಯ ಮೌಲ್ಯಮಾಪನಗಳು ಸೇರಿವೆ.ಮುಂದಿನ ಚಿಕಿತ್ಸೆ ತಪಾಸಣೆಯ ನಂತರ ಹೆಚ್ಚಿನ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆ ಅಗತ್ಯವಿರುವವರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಪಡೆಯಲು ಶಿಫಾರಸು ಮಾಡಲಾಗುತ್ತದೆ. ಎಂದರು

ಈ ಸಂಧರ್ಭದಲ್ಲಿ ಎಂ. ಜಿ. ಎಂ. ಆಸ್ಪತ್ರೆ ಆಡಳಿತಧಿಕಾರಿ ಪ್ರಿಯಾಂಕಾ, ರೋಟರಿ ಸಂಸ್ಥೆಯ ಅಧ್ಯಕ್ಷ ಹೆಚ್. ಎಂ. ಪ್ರಸಾದ್, ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಡಾ. ವಂದನಾ ಎಂ ಇರ್ವತಾಯ ಹಾಗೂ ರೋಟರಿ ಸದಸ್ಯರು ಸೇರಿದಂತೆ ಹೊಯ್ಸಳ ಆಸ್ಪತ್ರೆ ಸಿಬ್ಬಂದಿಗಳು ಶ್ರೀ ಕೃಷ್ಣ ಆಸ್ಪತ್ರೆ ಸಿಬ್ಬಂದಿಗಳು, ಎಂ. ಜಿ. ಎಂ ಆಸ್ಪತ್ರೆ ಸಿಬ್ಬಂದಿಗಳು ಸೇರಿದಂತೆ ವಿವಿಧ ಶಾಲೆ ಶಿಕ್ಷಕರು ವಿದ್ಯಾರ್ಥಿ ಗಳು, ಸಾರ್ವಜನಿಕರು ಇದ್ದರು.

ವರದಿ: ಪುನೀತ್ ಕಡಿದಾಳು 

9483811948

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!